Thursday, July 25, 2013
ಝಕಾತ್
ಝಕಾತ್ ಇಸ್ಲಾಮಿನ ಮೂರನೇ
ಕಡ್ಡಾಯವಾಗಿದೆ. ನಮಾಜ್ ದೈಹಿಕ ಆರಾಧನೆಯಾದರೆ ಝಕಾತ್ ಸಂಪತ್ತಿನ ಮೂಲಕ ದೇವ ಸಂಪ್ರೀತಿಯನ್ನು
ಗಳಿಸುವ ಮಾರ್ಗವಾಗಿದೆ. ಒಬ್ಬ ಸ್ಥಿತಿವಂತ ಮುಸ್ಲಿಂ ತನ್ನ ಸಂಪಾದನೆಯ ನಿರ್ದಿಷ್ಟ ಭಾಗವನ್ನು
ಅರ್ಹರಿಗೆ ನಿರ್ಬಂಧಿತವಾಗಿ ಕೊಡಲೇ ಬೇಕು. ಝಕಾತ್ ಸಿರಿವಂತರು ತೋರುವ ಔದಾರ್ಯವಲ್ಲದೆ ಅದು ಬಡವರ
ಹಕ್ಕಾಗಿದೆ ಎಂದು ಇಸ್ಲಾಂ ತಿಳಿಸುತ್ತದೆ. ಸಂಪತ್ತಿನ ಒಡೆಯ ಅಲ್ಲಾಹನಾಗಿರುತ್ತಾನೆ. ಮನುಷ್ಯ ಅದರ
ಮೇಲ್ವಿಚಾರಕ ಮಾತ್ರನಾಗಿರುತ್ತನೆಂದೂ ಅದು ನೆನಪಿಸುತ್ತದೆ. ಸಮಾಜಿಕ ಜೀವನದ ಕೆಲವು ಮಹತ್ತರವಾದ
ಉದ್ದೇಶಗಳನ್ನು ಈಡೇರಿಸುವುದೂ ಝಕಾತಿನ ಔಚಿತ್ಯಗಳಲ್ಲೊಂದು. ಅವುಗಳಲ್ಲಿ ಮುಖ್ಯವಾದುದರೆಂದರೆ,
ಇದೇ
ಕಾರಣದಿಂದ ಝಕಾತ್ ನೀಡದವರಿಗೆ ಮತ್ತು ಅದನ್ನು ತಡೆಹಿಡಿದವರಿಗೆ ಕಠಿಣ ಶಿಕ್ಷೆಯಾಗುವುದೆಂದು
ಪವಿತ್ರ ಕುರ್ಆನ್
ಎಚ್ಚರಿಕೆ ನೀಡುತ್ತದೆ. ಅದು ಹೇಳುತ್ತದೆ: " ಓ ಸತ್ಯ ವಿಶ್ವಾಸಿಗಳೇ! ಗ್ರಂಥದವರ ಅಧಿಕಾಂಶ
ವಿಧ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನಧಿಕ್ರತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು
ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು
ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ. ಈ ಚಿನ್ನ
ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ
ಬರೆ ಹಾಕಲಾಗು ವುದು. ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ, ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು
ಸವಿಯಿರಿ" (ಎನ್ನಲಾಗುವುದು)
Subscribe to:
Post Comments (Atom)
No comments:
Post a Comment