ರಹ್ಮಾನನ ನಿಜವಾದ ದಾಸರು ಭೂಮಿಯ ಮೇಲೆ ಸೌಮ್ಯ ನಡಿಗೆ
ನಡೆಯುತ್ತಾರೆ. ತಿಳಿಗೇಡಿ ವ್ಯರ್ಥ ತಕರಾರಿಗೆ ಬಂದಾಗ "ನಿಮಗೆ ಸಲಾಮ್" ಎಂದು
ಬಿಡುತ್ತಾರೆ.
ಅವರು ತಮ್ಮ ಪ್ರಭುವಿನ ಮುಂದೆ ಸಾಷ್ಟಾಂಗವೆರಗುತ್ತಲೂ
ನಿಲ್ಲುತ್ತಲೂ ರಾತ್ರಿಗಳನ್ನು ಕಳೆಯುತ್ತಾರೆ.
ಆ ಪರಮ ದಯಾಳುವಿನ (ನಿಷ್ಠ) ದಾಸರು ಭೂಮಿಯಲ್ಲಿ ವಿನಯದ
ನಡಿಗೆ ನಡೆಯುತ್ತಾರೆ ಮತ್ತು ತಮ್ಮೊಡನೆ ಅಜ್ಞಾನಿಗಳು ಮಾತಿಗಿಳಿದರೆ ಅವರು,‘ಸಲಾಮ್’ ಎಂದಷ್ಟೇ ಹೇಳುತ್ತಾರೆ. ಅವರು ರಾತ್ರಿಯನ್ನು ತಮ್ಮ
ಒಡೆಯನಿಗೆ ಸಾಷ್ಟಾಂಗ ವೆರಗುತ್ತಲೂ ನಿಲ್ಲುತ್ತಲೂ (ನಮಾಝ್ನಲ್ಲಿ) ಕಳೆಯುತ್ತಾರೆ. ಅವರು
ಹೇಳುತ್ತಾರೆ; ನಮ್ಮೊಡೆಯಾ, ನರಕದ
ಶಿಕ್ಷೆಯನ್ನು ನಮ್ಮಿಂದ ದೂರವಿಡು. ಖಂಡಿತವಾಗಿಯೂ ಅದು ಬಿಡುಗಡೆ ಇಲ್ಲದ ಶಿಕ್ಷೆಯಾಗಿದೆ. ಅದು
ಖಂಡಿತ ತೀರಾ ಕೆಟ್ಟ ನೆಲೆಯಾಗಿದೆ ಹಾಗೂ ತೀರಾ ಕೆಟ್ಟ ಸ್ಥಳವಾಗಿದೆ. ಅವರು ಖರ್ಚು ಮಾಡುವಾಗ ದುಂದು
ವೆಚ್ಚವನ್ನು ಮಾಡುವುದಿಲ್ಲ, ಜಿಪುಣತೆಯನ್ನೂ ತೋರುವುದಿಲ್ಲ. ಅವೆರಡರ
ನಡುವಣ ಮಾರ್ಗವನ್ನು ಪಾಲಿಸುತ್ತಾರೆ.
[ಕುರಾನ್, 25: 63-67]
No comments:
Post a Comment