ಮುಹಮ್ಮದರು ಅಲ್ಲಾಹನ ದೂತರು. ಅವರ ಜೊತೆಗಿರುವವರು
ಧಿಕ್ಕಾರಿಗಳ ಪಾಲಿಗೆ ಕಠೋರರೂ ಪರಸ್ಪರ ಕರುಣಾಳುಗಳೂ ಆಗಿರುತ್ತಾರೆ. ಅವರು (ಅಲ್ಲಾಹನ ಮುಂದೆ)
ಬಾಗುತ್ತಲೂ ಸಾಷ್ಟಾಂಗ ವೆರಗುತ್ತಲೂ ಇರುವುದನ್ನು ಮತ್ತು ಅಲ್ಲಾಹನ ಅನುಗ್ರಹ ಹಾಗೂ ಅವನ
ಮೆಚ್ಚುಗೆಯನ್ನು ಅರಸುತ್ತಲಿರುವುದನ್ನು ನೀವು ಕಾಣುವಿರಿ. ಅವರ ಲಕ್ಷಣವೇನೆಂದರೆ, ಸಾಷ್ಟಾಂಗವಂದನೆಯ ಪ್ರಭಾವವು ಅವರ ಮುಖಗಳಲ್ಲಿರುವುದು. ತೌರಾತ್ನಲ್ಲಿ ಅವರ ಲಕ್ಷಣವು
ಹೀಗೆಯೇ ಇದೆ ಮತ್ತು ಇಂಜೀಲ್ನಲ್ಲಿ ಅವರ ಲಕ್ಷಣವು ಹೀಗಿದೆ; ತನ್ನ
ತೆನೆಯನ್ನು ಮೊಳೆಯಿಸುವ ಒಂದು ಹೊಲದಂತೆ. ಅದು ಅದನ್ನು ಬಲಪಡಿಸುತ್ತಿರುತ್ತದೆ. ಕೊನೆಗೆ ಅದು
ಬಲಿಷ್ಠವಾಗಿ ಸ್ವತಃ ತನ್ನ ಕಾಂಡದ ಮೇಲೆ ನಿಲ್ಲುತ್ತದೆ. ಅದನ್ನು ಕಂಡು ಕೃಷಿಕರಿಗೆ
ಸಂತಸವಾಗುತ್ತದೆ. ಧಿಕ್ಕಾರಿಗಳು ಉರಿದು ಬೀಳಲೆಂದು (ವಿಶ್ವಾಸಿಗಳನ್ನು ಈ ರೀತಿ
ಬೆಳೆಸಲಾಗುತ್ತದೆ). ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುವವರಿಗೆ ಅಲ್ಲಾಹನು ಕ್ಷಮೆ ಹಾಗೂ
ಮಹಾ ಪ್ರತಿಫಲದ ಭರವಸೆ ನೀಡಿರುವನು.
[ಕುರಾನ್, 48: 29]
No comments:
Post a Comment