Friday, February 7, 2014

ನಮ್ಮ ಅಂಗಾಂಗಳು ಸಾಕ್ಷ್ಯ ಹೇಳುವ ಆ ದಿನ


ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರಿಗಾಗಿ, ಅವರು ಮಾಡುತ್ತಿದ್ದ ಕರ್ಮಗಳಿಗೆ ಪ್ರತಿಫಲವಾಗಿ, ಶಾಶ್ವತವಾದ ಭವ್ಯತೋಟಗಳಲ್ಲಿರುವ ನಿವಾಸಗಳಿವೆ.
ಇನ್ನು ಅವಿಧೇಯರಾಗಿದ್ದವರ ಪಾಲಿಗೆ ನರಕವೇ ನೆಲೆಯಾಗಿರುವುದು. ಅವರು ಅದರಿಂದ ಹೊರಹೋಗಲು ಬಯಸಿದಾಗಲೆಲ್ಲಾ ಅವರನ್ನು ಮತ್ತೆ ಅದರೊಳಕ್ಕೆ ಮರಳಿಸಿ ಬಿಡಲಾಗುವುದು ಮತ್ತು ಅವರೊಡನೆ, ‘‘ನೀವು ನಿರಾಕರಿಸುತ್ತಿದ್ದ ನರಕದ ಶಿಕ್ಷೆಯನ್ನು ಸವಿಯಿರಿ’’ ಎನ್ನಲಾಗುವುದು.
ನಾವು (ಪರಲೋಕದ) ದೊಡ್ಡ ಶಿಕ್ಷೆಗೆ ಮುನ್ನ ಅವರಿಗೆ (ಇಹಲೋಕದಲ್ಲಿ) ಸಣ್ಣ ಶಿಕ್ಷೆಗಳ ಸವಿ ಕಾಣಿಸುವೆವು ಅವರು (ಸರಿದಾರಿಗೆ) ಮರಳಬಹುದೆಂದು.
ತನ್ನ ಒಡೆಯನ ವಚನಗಳ ಮೂಲಕ ಉಪದೇಶಿಸಲ್ಪಟ್ಟ ಬಳಿಕವೂ ಅದನ್ನು ಕಡೆಗಣಿಸಿ ಬಿಟ್ಟವನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಖಂಡಿತವಾಗಿಯೂ ನಾವು ಅಪರಾಧಿಗಳ ವಿರುದ್ಧ ಪ್ರತೀಕಾರ ತೀರಿಸುವೆವು. 
[ಕುರಾನ್, 32: 19-22]

ಅವರು ಏನೆಲ್ಲಾ ಮಾಡುತ್ತಿದ್ದರೆಂದು ಅವರದೇ ನಾಲಿಗೆಗಳು, ಅವರದೇ ಕೈಗಳು ಮತ್ತು ಅವರದೇ ಕಾಲುಗಳು ಅವರ ವಿರುದ್ಧ ಸಾಕ್ಷ ಹೇಳುವ ದಿನ (ಖಂಡಿತ ಬರಲಿದೆ). 
[ಕುರಾನ್, 24: 24]

No comments:

Post a Comment