ಮತ್ತು ‘‘ಅಲ್ಲಾಹನ
ದೂತರಾಗಿದ್ದ, ಮರ್ಯಮರ ಪುತ್ರ ಈಸಾ ಮಸೀಹರನ್ನು ನಾವು ಕೊಂದೆವು’’
ಎಂಬ ಅವರ ಹೇಳಿಕೆಯ ಕಾರಣ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರು ಅವರನ್ನು
(ಈಸಾರನ್ನು) ಕೊಲ್ಲಲೂ ಇಲ್ಲ, ಶಿಲುಬೆಗೇರಿಸಲೂ ಇಲ್ಲ. ಅವರಿಗೆ ಅದನ್ನು
ಆ ರೀತಿ ಕೇವಲ ಕಾಣಿಸಲಾಗಿತ್ತು. ಈ ವಿಷಯದಲ್ಲಿ ಭಿನ್ನತೆ ತಾಳಿರುವವರೆಲ್ಲಾ ಖಂಡಿತ ಈ ಕುರಿತು
ಸಂಶಯದಲ್ಲಿದ್ದಾರೆ. ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ
ಅನುಸರಿಸುತ್ತಿದ್ದಾರೆ. ಅವರು ಆತನನ್ನು ಕೊಲ್ಲಲಿಲ್ಲ ಎಂಬುದಂತೂ ಖಚಿತ. ನಿಜವಾಗಿ ಅಲ್ಲಾಹನು
ಅವರನ್ನು (ಈಸಾರನ್ನು) ತನ್ನೆಡೆಗೆ ಎತ್ತಿಕೊಂಡನು. ಅಲ್ಲಾಹನಂತು ತುಂಬಾ ಪ್ರಚಂಡನೂ ಯುಕ್ತಿವಂತನೂ
ಆಗಿರುವನು.
[ಕುರಾನ್, 4: 157-158]
No comments:
Post a Comment