Friday, February 7, 2014

ಈಸಾರನ್ನು ಕೊಲ್ಲಲೂ ಇಲ್ಲ ಶಿಲುಬೆಗೇರಿಸಲೂ ಇಲ್ಲ


ಮತ್ತು ‘‘ಅಲ್ಲಾಹನ ದೂತರಾಗಿದ್ದ, ಮರ್ಯಮರ ಪುತ್ರ ಈಸಾ ಮಸೀಹರನ್ನು ನಾವು ಕೊಂದೆವು’’ ಎಂಬ ಅವರ ಹೇಳಿಕೆಯ ಕಾರಣ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರು ಅವರನ್ನು (ಈಸಾರನ್ನು) ಕೊಲ್ಲಲೂ ಇಲ್ಲ, ಶಿಲುಬೆಗೇರಿಸಲೂ ಇಲ್ಲ. ಅವರಿಗೆ ಅದನ್ನು ಆ ರೀತಿ ಕೇವಲ ಕಾಣಿಸಲಾಗಿತ್ತು. ಈ ವಿಷಯದಲ್ಲಿ ಭಿನ್ನತೆ ತಾಳಿರುವವರೆಲ್ಲಾ ಖಂಡಿತ ಈ ಕುರಿತು ಸಂಶಯದಲ್ಲಿದ್ದಾರೆ. ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಅವರು ಆತನನ್ನು ಕೊಲ್ಲಲಿಲ್ಲ ಎಂಬುದಂತೂ ಖಚಿತ. ನಿಜವಾಗಿ ಅಲ್ಲಾಹನು ಅವರನ್ನು (ಈಸಾರನ್ನು) ತನ್ನೆಡೆಗೆ ಎತ್ತಿಕೊಂಡನು. ಅಲ್ಲಾಹನಂತು ತುಂಬಾ ಪ್ರಚಂಡನೂ ಯುಕ್ತಿವಂತನೂ ಆಗಿರುವನು. 
[ಕುರಾನ್, 4: 157-158]

No comments:

Post a Comment